ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಖಾಲಿ ಪೇಪರ್ ಸಹಿ ವಿವಾದ: ಪಿಎಸ್‌ಐ ವಿರುದ್ಧ ವಕೀಲರ ಆಕ್ರೋಶ

"ಪ್ರಶ್ನೆ ಕೇಳಿದ್ದಕ್ಕೆ ನಿಂದನೆ" – ತುರ್ವಿಹಾಳ ಠಾಣೆ ಪಿಎಸ್‌ಐ ವಿರುದ್ಧ ಆರೋಪ

Advertisement

ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡ ಆರೋಪ: ಪಿಎಸ್‌ಐ ವಿರುದ್ಧ ವಕೀಲರ ಆಕ್ರೋಶ

Advertisement

ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್‌ಐ ಸುಜಾತ ಅವರ ವಿರುದ್ಧ ಖಾಲಿ ಪೇಪರ್ ಮೇಲೆ ದೂರುದಾರರಿಂದ ಸಹಿ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಕೀಲ ಅರಳಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊ ಹಾಗೂ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿರುವ ವಕೀಲ ಅರಳಯ್ಯ, "ದೂರುದಾರರೊಬ್ಬರು ತಮ್ಮನ್ನು ಸಂಪರ್ಕಿಸಿ ಠಾಣೆಯಲ್ಲಿ ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ತೆರಳಿ ವಿಚಾರಿಸಿದಾಗ ಪಿಎಸ್‌ಐ ಸುಜಾತ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ" ಎಂದು ಆರೋಪಿಸಿದ್ದಾರೆ.

news_1782112029_0_801.webp

"ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಳ್ಳುವುದು ಕಾನೂನಾತ್ಮಕವಾಗಿ ಸರಿಯೇ ಎಂಬ ಪ್ರಶ್ನೆಯನ್ನು ಕೇಳಿದ್ದಕ್ಕೆ ನನಗೆ ಅವಮಾನ ಮಾಡಿದ್ದಾರೆ. ಈ ಕುರಿತು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಹಾಗೂ ಬಾರ್ ಕೌನ್ಸಿಲ್‌ಗೆ ದೂರು ಸಲ್ಲಿಸಲು ನಿರ್ಧರಿಸಿದ್ದೇನೆ" ಎಂದು ಅವರು ತಿಳಿಸಿದ್ದಾರೆ.

news_1778905892_0_440.webp

ಈ ಅಧಿಕಾರಿ ಸಾರ್ವಜನಿಕರೊಂದಿಗೆ ಇದೇ ರೀತಿಯ ವರ್ತನೆ ನಡೆಸಿರುವ ಬಗ್ಗೆ ಈ ಹಿಂದೆ ಕೂಡ ದೂರುಗಳು ಕೇಳಿಬಂದಿವೆ ಎಂದು ಕೆಲವು ಸ್ಥಳೀಯರು ಆರೋಪಿಸಿದ್ದಾರೆ. ವಕೀಲರೊಂದಿಗೆ ಈ ರೀತಿಯ ವರ್ತನೆ ನಡೆದಿದ್ದರೆ ಸಾಮಾನ್ಯ ಸಾರ್ವಜನಿಕರೊಂದಿಗೆ ಯಾವ ರೀತಿಯಲ್ಲಿ ನಡೆದುಕೊಳ್ಳಬಹುದು ಎಂಬ ಪ್ರಶ್ನೆ ಸ್ಥಳೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆ ಕುರಿತು ಸಂಪೂರ್ಣ ತನಿಖೆ ನಡೆಸಿ, ಸತ್ಯಾಂಶ ಹೊರತಂದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ವಕೀಲ ಸಮುದಾಯ ಆಗ್ರಹಿಸಿದೆ.

news_1780037113_0_501.webp

ಇನ್ನೊಂದೆಡೆ, ಈ ಸಂಬಂಧ ಪಿಎಸ್‌ಐ ಸುಜಾತ ಅವರ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ದೊರೆತಲ್ಲಿ ಪ್ರಕಟಿಸಲಾಗುವುದು. ಒಟ್ಟಾರೆ, ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿರುವ ಆರೋಪ ಹಾಗೂ ವಕೀಲರೊಂದಿಗೆ ನಡೆದಿರುವ ಎನ್ನಲಾದ ವಾಗ್ವಾದ ಪ್ರಕರಣ ಇದೀಗ ಸಿಂಧನೂರು ಪೊಲೀಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮೇಲಾಧಿಕಾರಿಗಳ ತನಿಖೆಯ ನಂತರವೇ ವಾಸ್ತವಾಂಶ ಬಹಿರಂಗವಾಗಬೇಕಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ