ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಧಿಕಾರಿಗಳ ಮೇಲೆ ಕುಟುಂಬ ರಾಜಕಾರಣ?

ವರ್ಗಾವಣೆ, ಅಮಾನತು ಬೆದರಿಕೆ ಆರೋಪ – ಸಿಂಧನೂರಲ್ಲಿ ಆಡಳಿತದ ಮೇಲೆ ಪ್ರಶ್ನೆಗಳು

Advertisement

ರಾಯಚೂರು ಜಿಲ್ಲೆಯಲ್ಲಿ ಜನಪ್ರತಿನಿಧಿಗಳ ಕುಟುಂಬದ ಸದಸ್ಯರಿಂದ ಅಧಿಕಾರಿಗಳ ಮೇಲೆ ಒತ್ತಡದ ಆರೋಪ? – ಸಿಂಧನೂರಲ್ಲಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

Advertisement

 

ಸಿಂಧನೂರು, ಜುಲೈ 3: ರಾಯಚೂರು ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳ ಮೇಲೆ ಕೆಲ ಜನಪ್ರತಿನಿಧಿಗಳ ಕುಟುಂಬದ ಸದಸ್ಯರು ಹಾಗೂ ಆಪ್ತರಿಂದ ಅನಗತ್ಯ ಹಸ್ತಕ್ಷೇಪ ಮತ್ತು ಒತ್ತಡ ನಡೆಯುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದ್ದು, ವಿಶೇಷವಾಗಿ ಸಿಂಧನೂರು ತಾಲೂಕಿನಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ.

news_1781778738_0_399.webp

ಹೆಸರು ಬಹಿರಂಗಪಡಿಸಲು ಇಚ್ಛಿಸದ ಕೆಲವು ಅಧಿಕಾರಿಗಳು ಹೇಳುವಂತೆ, ಇಲಾಖೆಯ ನಿಯಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸಲು ಮುಂದಾದಾಗ, ಕೆಲ ಪ್ರಭಾವಿ ವ್ಯಕ್ತಿಗಳು ತಮ್ಮ ಪ್ರಭಾವ ಬಳಸಿ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. "ನಾವು ಹೇಳಿದಂತೆ ಕೆಲಸ ಮಾಡಬೇಕು. ಇಲ್ಲದಿದ್ದರೆ ವರ್ಗಾವಣೆ ಮಾಡಿಸುತ್ತೇವೆ, ಅಮಾನತು ಮಾಡಿಸುತ್ತೇವೆ, ನಿನ್ನನ್ನು ನೋಡಿಕೊಳ್ಳುತ್ತೇವೆ" ಎಂಬ ರೀತಿಯ ಮಾತುಗಳನ್ನು ಕೇಳಬೇಕಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಕಾನೂನು ಮತ್ತು ಇಲಾಖೆಯ ನಿಯಮಗಳ ಪ್ರಕಾರ ನಿರ್ವಹಿಸಲು ಪ್ರಯತ್ನಿಸುತ್ತಿದ್ದರೂ, ಕೆಲವರು ಜನಪ್ರತಿನಿಧಿಗಳ ಹೆಸರು ಬಳಸಿ ಅಥವಾ ಅವರ ಕುಟುಂಬದ ಸದಸ್ಯರು ಹಾಗೂ ಆಪ್ತರೆಂದು ಹೇಳಿಕೊಂಡು ಆಡಳಿತಾತ್ಮಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

news_1780037113_0_501.webp

ಸಾರ್ವಜನಿಕ ವಲಯದಲ್ಲಿ, "ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳೇ ತಮ್ಮ ಅಧಿಕಾರವನ್ನು ಚಲಾಯಿಸಬೇಕು. ಆದರೆ ಅಧಿಕೃತ ಹುದ್ದೆಯಲ್ಲದ ಕುಟುಂಬದ ಸದಸ್ಯರು ಅಥವಾ ಆಪ್ತರು ಅಧಿಕಾರಿಗಳ ಮೇಲೆ ಪ್ರಭಾವ ಬೀರುವುದು ಸರಿಯೇ?" ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಕೆಲ ಅಧಿಕಾರಿಗಳು, "ನಿಯಮಾನುಸಾರ ಕೆಲಸ ಮಾಡಿದರೆ ಒಂದು ರೀತಿಯ ಒತ್ತಡ, ನಿಯಮ ಮೀರಿ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಇಲಾಖಾ ಕ್ರಮ ಎದುರಿಸುವ ಪರಿಸ್ಥಿತಿ. ಈ ಎರಡರ ನಡುವೆ ಕರ್ತವ್ಯ ನಿರ್ವಹಿಸುವುದು ಕಷ್ಟವಾಗುತ್ತಿದೆ" ಎಂದು ತಮ್ಮ ಅಳಲನ್ನು ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

news_1779340187_0_802.webp

ಸರ್ಕಾರಿ ಅಧಿಕಾರಿಗಳು ಯಾವುದೇ ಬಾಹ್ಯ ಒತ್ತಡವಿಲ್ಲದೆ ಸರ್ಕಾರದ ನಿಯಮಗಳು ಮತ್ತು ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಬೇಕು. ಆಡಳಿತದಲ್ಲಿ ಅನಧಿಕೃತ ಹಸ್ತಕ್ಷೇಪದ ಆರೋಪಗಳಿದ್ದರೆ, ಅವುಗಳನ್ನು ಸಂಬಂಧಪಟ್ಟ ಉನ್ನತ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇಂತಹ ಆರೋಪಗಳು ಮುಂದುವರಿದರೆ, ಅಧಿಕಾರಿಗಳಲ್ಲಿ ಭಯ ಮತ್ತು ಅನಿಶ್ಚಿತತೆ ಉಂಟಾಗಿ ಆಡಳಿತದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕವೂ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ