ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆಗೆ ಚಂದ್ರಬಾಬು ನಾಯ್ಡುಗೆ ಆಹ್ವಾನ

ಜೂನ್ 25ರ ಸಮಾರಂಭಕ್ಕೆ ಆಗಮಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಒಪ್ಪಿಗೆ

Advertisement

ಅಮರಾವತಿ/ಸಿಂಧನೂರು, ಜೂನ್ 22: ಮುನಿರಾಬಾದ್‌ನಲ್ಲಿ ಜೂನ್ 25ರಂದು ನಡೆಯಲಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಕರ್ನಾಟಕದ ಶಾಸಕರ ನಿಯೋಗವು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿತು.

Advertisement

news_1781965592.webp

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಶಾಸಕರಾದ ಎನ್.ಎಸ್. ಬೋಸರಾಜು, ಬಸವರಾಜ ರಾಯರೆಡ್ಡಿ ಹಾಗೂ ಬಸನಗೌಡ ಬಾದರ್ಲಿ ಅವರ ನೇತೃತ್ವದ ನಿಯೋಗವು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಆಹ್ವಾನ ಪತ್ರ ನೀಡಿತು.

news_1780037113_0_501.webp

ಈ ಸಂದರ್ಭದಲ್ಲಿ ತುಂಗಭದ್ರಾ ಅಣೆಕಟ್ಟಿನ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಳವಡಿಸಲಾಗಿರುವ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದ ಮಹತ್ವವನ್ನು ನಿಯೋಗವು ವಿವರಿಸಿತು. ಆಹ್ವಾನ ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೂನ್ 25ರಂದು ಮುನಿರಾಬಾದ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಒಪ್ಪಿಗೆ ನೀಡಿದರು. ತುಂಗಭದ್ರಾ ಯೋಜನೆಯ ಪ್ರಮುಖ ಫಲಾನುಭವಿಗಳಲ್ಲಿ ಆಂಧ್ರಪ್ರದೇಶವೂ ಒಂದಾಗಿರುವ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರ ಉಪಸ್ಥಿತಿಯು ಸಮಾರಂಭಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ನಿಯೋಗದ ಸದಸ್ಯರು ತಿಳಿಸಿದರು.

news_1781778738_0_399.webp

ಈ ವೇಳೆ ಆಂಧ್ರಪ್ರದೇಶ ಸರ್ಕಾರದ ಸಚಿವರಾದ ರಾಮ್ ಮೋಹನ್ ನಾಯ್ಡು ಹಾಗೂ ಪಿ. ಕೇಶವ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಜೂನ್ 25ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ವಿವಿಧ ರಾಜ್ಯಗಳ ಗಣ್ಯರು ಭಾಗವಹಿಸುವ ನಿರೀಕ್ಷೆ ಇದ್ದು, ತುಂಗಭದ್ರಾ ಜಲಾಶಯದ ನೂತನ ಗೇಟ್‌ಗಳ ಉದ್ಘಾಟನೆ ಐತಿಹಾಸಿಕ ಕ್ಷಣವಾಗಲಿದೆ ಎಂದು ಮೂಲಗಳು ತಿಳಿಸಿವೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ